ಸೋಮವಾರ, ಅಕ್ಟೋಬರ್ 9, 2017

Pebbe

ಹಿಮಕರಡಿ (ಪೆಬ್ಬೆ)

ಒಂದು ದಿನ ಹಿಮಕರಡಿ ಮರಿಯೊಂದು ತನ್ನ ಮನೆಯ ಮುಂದೆ ಸಪ್ಪೆ ಮುಖ ಮಾಡಿಕೊಂಡು ಕುಳಿತಿತ್ತು . ತನ್ನ ಅಣ್ಣ ಅಕ್ಕಂದಿರು ಎಲ್ಲ ಶಾಲೆಗೆ ತೆರಳಿದ್ದರು.  ಅಮ್ಮ ಮನೆಯಲ್ಲೇ ಇದ್ದರು , ಅಡುಗೆ ಮನೆಯಲ್ಲಿ ಅವಳಿಗೆ ಉಸಿರಾಡಲು ಪುರುಸೊತ್ತು ಇಲ್ಲದಷ್ಟು ಕೆಲಸ. ಆಟವಾಡಲು ಯಾರಾದರೂ ಸಿಗಬಹುದೇ ಎಂದು ದಾರಿ ನೋಡುತ್ತಾ ಕುಳಿತಿದ್ದ ಪೆಬ್ಬೆ. ಅಷ್ಟರಲ್ಲಿ ಅವನ ಅಮ್ಮ ಕರೆದದ್ದು ಕೇಳಿ , ಆಟವಾಡಲು ಕರೆಯುತ್ತಿದಾಳೆ ಎಂದು ಖುಷಿಯಲ್ಲಿ ಒಳಗೆ ಓಡಿತು .

ಸಂಜೆ ತಿಂಡಿ ಗೆ ಪಾಯಸ ಮಾಡುವಾದಾಗಿ ಯೋಚಿಸ್ಸಿದ್ದ ತಾಯಿ , ಮನೆಯಲ್ಲಿ ಸಕ್ಕರೆ ಖಾಲಿ ಯಾಗಿರಿವುದನ್ನು ನೋಡಿ , ಅದನ್ನು ತರಲು ಪೆಬ್ಬೆಯನ್ನು ಕರೆದಿದ್ದಳು . "ಪೆಬ್ಬೆ ಅಂಗಡಿ ಗೆ ಹೋಗಿ ಕೆಜಿ ಸಕ್ಕರೆ ತಾ, ನಿನ್ನ ಅಣ್ಣ ಅಕ್ಕ ಶಾಲೆ ಇಂದ ಬರುವು ವೇಳೆಗೆ ಪಾಯಸ ಮಾಡುವೆ , ಎಲ್ಲರು ತಿನ್ನುವ" ಎಂದು ಅದರ ಕೈಗೆ ಚೀಲ ಮತ್ತು ಹಣವನ್ನು ನೀಡಿದಳು . ಆಟವಾಡಲು ಕರೆಯುತ್ತಿದಾಳೆ ಎಂದು ನೆನೆಸಿದ ಪೆಬ್ಬೆಗೆ ತುಸು ನಿರಾಸೆ ಯಾದರು , ಅಂಗಡಿಗೆ ಹೋಗುವ ಕೆಲಸ ಮನೆಯ ಮುಂದೆ ದಾರಿ ಕಾಯುವುದಕ್ಕಿಂತ ಲೇಸು ಎನ್ನಿಸಿ , ಚೀಲ ಹಿಡಿದು ಅಂಗಡಿಯ ಕಡೆ ಹೊರಟಿತು .

ಹಿಮದಿಂದ ಆವರಿಸಿದ ಬೆಟ್ಟ ಗುಡ್ಡಗಳ ಹತ್ತಿ ಇಳಿಯುತ್ತ  ಸಾಗಿದ್ದ ಪೆಬ್ಬೆ ಇದ್ದಕ್ಕಿದ್ದ ಹಾಗೆ ಏನೆನ್ನೋ ನೆನಸಿಕೊಂಡು ಹಾಗೆ  ಹಿಂದೆ ತಿರುಗಿ ಅಲ್ಲೇ ಇದ್ದ ಹಿಮ ಸರೋವರವನ್ನು ನೋಡಿ ,ಅದರಲ್ಲಿ ಇರುವು ಸಣ್ಣ ಪುಟ್ಟ ಮೀನುಗಳನ್ನು ಹಿಡಿದು ತಿನ್ನುವ , ನೀರಲ್ಲಿ ಆಟವಾಡುವ ಆಸೆಯಿಂದ ಕಿರುನಗೆ ಬೀರುತ್ತಾ ಅದರ ಕಡೆಗೆ ಹೆಜ್ಜೆ ಹಾಕಿತು . ಇನ್ನು ಸಣ್ಣವನಾಗಿದ್ದ ಪೆಬ್ಬೆಗೆ ಗೆ ಮೀನು ಹಿಡಿಯುವುದು ಅಷ್ಟು ಸರಿಯಾಗಿ ಬರುತ್ತಿರಲಿಲ್ಲ . ಅಲ್ಲದೆ ಸರೋವರದಲ್ಲಿ ಇರಬಹುದಾದ ದೊಡ್ಡ ಮೀನುಗಳಿಂದ ಪೆಬ್ಬೆ ಗೆ ಅಪಾಯವಾಗಬಹುದು ಎಂದು ಅದರ ಅಪ್ಪ ಅಮ್ಮ ಅದಕ್ಕೆ ಸರೋವರದಲ್ಲಿ ಮೀನು ಹಿಡಿಯಲು ಬಿಟ್ಟಿರಲಿಲ್ಲ. ಆದರೆ ಈಗ ಯಾರು ತಡೆಯವರು ಇಲ್ಲದ ಕಾರಣ , ಪೆಬ್ಬೆ ಸರೋವರದ ಕಡೆಗೆ ಹೋಗುವು ಮೀನು ಹಿಡಿಯುವ ಧೈರ್ಯ ಮಾಡಿದ್ದ

ತನ್ನ ಮನಸಿಗೆ ತೃಪ್ತಿ ಆಗುವಷ್ಟು ಸಮಯ ಪೆಬ್ಬೆ ನೀರಿನಲ್ಲಿ ಆಟವಾಡಿತು . ಕೊರೆಯುವ ಹಿಮ ಸರೋವರದಲ್ಲಿ ಮಿಂದೆದ್ದು ಖುಷಿ ಪಟ್ಟಿತ್ತು  . ನೀರಿನ ಆಳದಲ್ಲಿ ಈಜಿ ಕಂಡ ಸಣ್ಣ ಪುಟ್ಟ ಮೀನುಗಳನ್ನು ಹಿಡಿದು ಗುಳುಂ ಎನಿಸಿತು . ತನ್ನ ಸಾಮರ್ಥ್ಯಕ್ಕೆ ತಾನೇ ಗರ್ವ ಪಡುತಾ, ಅಪ್ಪ ಅಮ್ಮ ಗೆ ಬುದ್ದಿ ಇಲ್ಲ , ನಾನು ಒಳ್ಳೆಯ ಬೇಟೆಗಾರ, ಈಜುಗಾರ, ಇಂದು ಮನೆಗೆ ಹೋದ ಮೇಲೆ ಎಲ್ಲರಿಗು ತನ್ನ ಆಟಗಳ ವರ್ಣನೆ ಮಾಡುವೆ ಎಂದು ಯೋಚಿಸಿಕೊಂಡು ನೀರಿನಲ್ಲಿ ಮುಳುಗೇಳುತ್ತಿತ್ತು . ತನ್ನದೇ ಲೋಕದಲ್ಲಿ ವಿಹರಿಸುತ್ತಿದ್ದ ಪೆಬ್ಬೆ , ದೊಡ್ಡ ಮೀನೊಂದು ತನ್ನ ಬಳಿ ಬರುವುದು ಕಾಣಲೇ ಇಲ್ಲ . ಇನ್ನೇನು ಆ ದೊಡ್ಡ ಮೀನು ಇದರ ಕಾಲಿಗೆ ಬಾಯಿ ಹಾಕುವಷ್ಟರಲ್ಲಿ , ಪೆಬ್ಬೆ ಎಚ್ಚೆತ್ತು ಮೇಲಕ್ಕೆ ಈಜಿತು . ಆದರೆ ಬಿಡದ ದೊಡ್ಡ ಮೀನು ಇದನ್ನು ಹಿಂಬಾಲಿಸಿ ತಿನಲ್ಲೂ ಯತ್ನಿಸ್ತು. ಆದ್ರೆ ಪೆಬ್ಬೆ ಅದೃಷ್ಟವಶಾತ್ ಹೇಗೋ ತಪ್ಪಿಸಿಕೊಂಡು ಜೀವಕ್ಕೆ ಜೀವ ಬಿಡುತ್ತ ಸರೋವರದಿಂದ ಮೇಲೆ ಓಡಿತು .

ಅಪ್ಪ ಅಮ್ಮ ನ ಮಾತನ್ನು ಕೇಳದೆ ವ್ಯರ್ಥ ಸಾಹಸಕ್ಕೆ ಹೊರಟಿದ್ದು ದೊಡ್ಡ ತಪ್ಪೆಂದು ಅರಿವಾಗಿ , ಇದು ಯಾವುದನ್ನು ಮನೆಯಲ್ಲಿ ಯಾರಿಗೂ ಹೇಳ್ಬಾರದು ಎಂದು ನಿರ್ಧರಿಸಿ ಅದೇ ಭಯದಲ್ಲಿ ಹೇಗೋ ಅಂಗಡಿಗೆ ತೆರಳಿ , ಸಕ್ಕರೆ ಖರೀದಿಸಿ , ಮನೆಗೆ ಸಾಗಿ ಅಮ್ಮನಿಗೆ ನೀಡಿತು . ಸಂಜೆ ಪಾಯಸ ತಿಂದು ಇನ್ನೇನು ಮಲುಗುವ ಸಮಯದಲ್ಲಿ , ಬೆಳ್ಳಿಗೆ ನಡೆದ ಎಲ್ಲ ಸಂಗತಿಗಳನ್ನು ಪೆಬ್ಬೆ ಅಮ್ಮನಲ್ಲಿ ಹೇಳಿತು , ಬೈಯ್ಯಬಹುದೆಂದು ನೆನಿಸಿದ್ದ ಪೆಬ್ಬೆಯ ಸಾಹಸಕ್ಕೆ ಖುಷಿ ಪಟ್ಟ ಅಮ್ಮ ಅದನ್ನು ತೋರ್ಪಡಿಸದೆ , ಮುಂದಿನ ಬಾರಿ ಒಬ್ಬನೇ ಸರೋವರದಲ್ಲಿ ಇಳಿಯಬಾರದೆಂದು ಆಣೆ ಮಾಡಿಸಿಕೊಂಡಳು .ಆಣೆ ಮಾಡಿದ ಪೆಬ್ಬೆ ಅಮ್ಮನ ಬಳಿ ಬೆಚ್ಚಗೆ ಮಲಗಿದ.